22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

“ನಮ್ಮ ಭೂಮಿ ನಮ್ಮ ಜವಾಬ್ದಾರಿ ” ಎಂಬ ಧ್ಯೆಯ ವಾಕ್ಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಶಾಲೆಯ ಆವರಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳು ಘೋಷ ವಾಕ್ಕಗಳನ್ನು ಮತ್ತು ಪರಿಸರ ಗೀತೆಗಳನ್ನು ಹಾಡಿದರು.


ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಗೂಡಿ ಶಾಲಾ ಮೈದಾನದ ಸುತ್ತಲೂ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪರಿಸರ ಸಂರಕ್ಷಣೆಯ ಕುರಿತಾದ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿ” ಗಿಡ ಬೆಳೆಸಿ ಜೀವ ಉಳಿಸಿ ಪ್ಲಾಸ್ಟಿಕ್ ಮುಕ್ತ ಸಮಾಜ ನಮ್ಮದಾಗಲಿ” ಎಂಬ ಘೋಷಣೆಗಳು ಎಲ್ಲರ ಗಮನ ಸೆಳೆಯಿತು. ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೂ ವಿವಿಧ ಚಟುವಟಿಕೆಗಳನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ .ಕೆ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಸಂಸ್ಥೆಯ ಸಂಯೋಜಕರು ಯಶವಂತ್ . ಜಿ ನಾಯಕ್ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ. ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!