ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನುಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಳ ವಿಭಾಗದ ಮುಖ್ಯಸ್ಥ ಪುರಂದರ ಭಟ್ ಮಾತನಾಡಿ ಪರಿಸರಕ್ಕೆ ನಾವು ಅನಿವಾರ್ಯವಲ್ಲ.ನಮಗೆ ಪರಿಸರ ಮುಖ್ಯ. ಪರಿಸರವನ್ನು ನಾವು ಚೆನ್ನಾಗಿ ನೋಡಿಕೊಂಡರೆ ನಾವು ಚೆನ್ನಾಗಿ ಇರುತ್ತೇವೆ. ಮನುಷ್ಯ ತನ್ನ ಅತಿ ಆಸೆಯಿಂದ ಪ್ರಕೃತಿ ನಾಶಗೊಳಿಸುತ್ತಿದ್ದಾನೆ. ಪರಿಣಾಮವಾಗಿ ಪ್ರಕೃತಿ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಾದ ನೀವು ಪರಿಸರವನ್ನು ಪ್ರೀತಿಸಿ, ಪರಿಸರ ಪ್ರೇಮಿಗಳಾಗಿ ಬಾಳಿ ಬದುಕಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶೋಭಾ ಇವರು ಅತಿಥಿಗಳ ಪರಿಚಯ ಓದಿದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕ ಜೋಸೆಫ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಶಿಕ್ಷಕಿ ಕೇಶವತಿ ಕೆ ವಂದಿಸಿದರು. ಶಿಕ್ಷಕಿ ಶ್ರೀಜಾ ಎ ಕಾರ್ಯಕ್ರಮ ನಿರ್ವಹಿಸಿದರು.












