July 23, 2026
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

ನಾರಾವಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಜೂನ್ 5ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ ಕುಮಾರ್ ಹೆಗಡೆ ನಾಮನಿರ್ದೇಶದ ಸದಸ್ಯರು ನಾರಾವಿ ಶಾಲೆ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಭಿಜಿತ್ ಜೈನ್ ಜನ ಸೇವಾ ಟ್ರಸ್ಟ್ ಇವರು ಇಂದಿನ ಕಾಲದಲ್ಲಿ ಪರಿಸರವನ್ನು ಉಳಿಸುವ ಅಗತ್ಯತೆಯ ಮಾಹಿತಿಯನ್ನು ಸವಿವರವಾಗಿ ತಿಳಿಸಿದರು. ಸುಧಾಕರ್ ಭಂಡಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಭಾಗವಹಿಸಿ ಪರಿಸರ ದಿನಾಚರಣೆಗೆ ಶುಭ ಕೋರಿದರು. ಪಿಡಿಓ ಸುಧಾಕರ್ ಸಸ್ಯ ಸಂಕುಲ, ಪ್ರಾಣಿ ಸಂಕುಲವನ್ನು ಉಳಿಸುವಲ್ಲಿ ಪರಿಸರದ ಮಹತ್ವವನ್ನು ವಿವರಿಸಿದರು. ಅರಣ್ಯ ಇಲಾಖೆಯ ಅರಣ್ಯ ಪಾಲಕರು ಮಹಾಂತೇಶ್ ಸಸ್ಯಗಳನ್ನು ನೆಡುವುದು ಅಲ್ಲದೆ ಅದನ್ನು ಪೋಷಿಸುವ ಜವಾಬ್ದಾರಿ ಕೂಡ ಅಷ್ಟೇ ಮುಖ್ಯ ಪರಿಸರ ಉಳಿಸಿದರೆ ನಾಡು ಉಳಿಯಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು.

ಮಂಜುನಾಥ್ ಅರಣ್ಯ ಪಾಲಕರು ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೊನಾಲ್ಟ್ ವಾಚರ್ ಪರಿಸರದ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಪರಿಸರವನ್ನು ರಕ್ಷಿಸುವಲ್ಲಿ ಲೋಕೇಶ್ ಸಾವಯವ ಗೊಬ್ಬರದ ಮಾಹಿತಿಯನ್ನು ನೀಡಿದರು. ಅಲ್ಲದೆ ಗೊಬ್ಬರವನ್ನು ಉಚಿತವಾಗಿ ನೀಡಿ ನೆಟ್ಟಂತಹ ಸಸಿಗಳಿಗೆ ಇಂದು ಹಾಕಲಾಯಿತು. ಸುಶೀಲ ಹೆಗ್ಡೆ ಮುಖ್ಯೋಪಾಧ್ಯಾಯರು ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇವರು ಸ್ವಾಗತಿಸಿದರು. ಶಾರದಾ ಶಿಕ್ಷಕರು ಬಂದಂತಹ ಅತಿಥಿಗಳಿಗೆ ಧನ್ಯವಾದ ನೀಡಿದರು. ಜ್ಞಾನೇಶ್ವರಿ ಕಾರ್ಯಕ್ರಮ ನಿರೂಪಣೆಗೈದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya
error: Content is protected !!