ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಬಳೆಂಜ, ಹಾಗೂ ಶಾಲೆಯ ಸಹಕಾರದೊಂದಿಗೆ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬಳೆಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಕಲಾ, ಅರಣ್ಯ ಇಲಾಖೆಯ ಹರಿಪ್ರಸಾದ್, ಮಂಜುನಾಥ, ಶಾಲಾ ಶಿಕ್ಷಕ ವೃಂದ ಹಾಗೂ ಊರ ಗಣ್ಯರು ಭಾಗವಹಿಸಿದ್ದರು. ಹರಿಪ್ರಸಾದ್ ರವರು ದಿನದ ಮಹತ್ವ ಹಾಗೂ ಆಚರಣೆಯ ಅಗತ್ಯವನ್ನು ವಿವರಿಸಿದರು.
ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿ ವಂದಿಸಿದರು.












