25.8 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.
ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.
ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇರುವುದಿಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವಾರು ಅವಾಂತರಗಳು ಸಂಭವಿಸಿದ್ದವು.ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಜರಿತ ಉಂಟಾಗಿಲ್ಲ.

ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು ಕೆಲವೊಂದು ಲಘು ಪ್ರಮಾಣದ ಜರಿತಗಳು ಉಂಟಾಗುತ್ತವೆ. ಆದರೆ ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ. ಈ ಬಾರಿ ಸಣ್ಣ ಪ್ರಮಾಣದ ಕುಸಿತ ಕಂಡುಬಂದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya
error: Content is protected !!