July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.
ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.
ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇರುವುದಿಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವಾರು ಅವಾಂತರಗಳು ಸಂಭವಿಸಿದ್ದವು.ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಜರಿತ ಉಂಟಾಗಿಲ್ಲ.

ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು ಕೆಲವೊಂದು ಲಘು ಪ್ರಮಾಣದ ಜರಿತಗಳು ಉಂಟಾಗುತ್ತವೆ. ಆದರೆ ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ. ಈ ಬಾರಿ ಸಣ್ಣ ಪ್ರಮಾಣದ ಕುಸಿತ ಕಂಡುಬಂದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

Related posts

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya
error: Content is protected !!