25.8 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. 

ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ 
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ 
ಕುಮಾರ್ ಉಪಸ್ಥಿತರಿದ್ದರು.

ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 
ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ 
ವ್ಯಕ್ತಪಡಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya
error: Content is protected !!