22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

ಸೋಣಂದೂರು: 2026 -27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ ಅದ್ದೂರಿಯಾಗಿ ನಡೆಸಲಾಯಿತು

ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಯನ್ನು ಸಹ ಪ್ರಾರಂಭಿಸಲಾಗಿದ್ದು ಈ ಶೈಕ್ಷಣಿಕ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಪನ್ನೀರ ಸಿಂಚನದೊಂದಿಗೆ ಆರತಿ ಬೆಳಗಿಸಿ ಬಲೂನುಗಳನ್ನು ನೀಡಿ ಜಾಥದ ಮೂಲಕ ಸ್ವಾಗತಿಸಲಾಯಿತು. ಈ ಜಾಥದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರು, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಅತಿಥಿಗಳು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು,

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗೇಶ್ ಗೌಡ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಇದರ ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್, ಉಪಾಧ್ಯಕ್ಷ ಸೆಲೆಸ್ತಿನ್, ಶಾಲಾ ಮುಖ್ಯ ಶಿಕ್ಷಕಿಯಾದ ಅನಿತಾ ರೇಷ್ಮಾ ಡಿಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಆರ್, ಮಹಮ್ಮಾಯಿಕಟ್ಟೆ ಫ್ರೆಂಡ್ಸ್ ಸೋಣಂದೂರು ಅಧ್ಯಕ್ಷ ಮೋಹನ ನಾಯ್ಕ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ, ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸರಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರದ ಯೋಜನೆಗಳ ಜೊತೆಗೆ ಸ್ಥಳೀಯ ಸಂಘ ಸಂಸ್ಥೆಗಳು ಇನ್ನಷ್ಟು ಉತ್ತಮವಾದ ಯೋಜನೆಗಳಿಗೆ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳು ಪೋಷಕರು ಎಸ್.ಡಿ.ಎಮ್ ಸಿ ಎಲ್ಲರೂ ಜೊತೆಗೂಡಿ ಜವಾಬ್ದಾರಿ ಹೊತ್ತುಕೊಂಡರೆ ಸರಕಾರಿ ಶಾಲೆಯು ಖಾಸಗಿ ಶಾಲೆಗಿಂತಲೂ ಉತ್ತಮವಾಗಿರುತ್ತದೆ ಎಂದು ಹೇಳಿ ಎಲ್ಲಾ ಮಕ್ಕಳಿಗೆ ರೋಟರಿ ಕ್ಲಬ್ ಇದರ ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್ ಶುಭ ಹಾರೈಸಿದರು.

ಶಾಲಾ ಹಳೆ ವಿದ್ಯಾರ್ಥಿ ಸಂಪತ್ ಶೆಟ್ಟಿ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಹಾಗೂ ರೋಟರಿ ಕ್ಲಬ್ ವತಿಯಿಂದ ನೀಡಲಾದ ನೋಟ್ ಪುಸ್ತಕಗಳನ್ನು ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್ ಹಾಗೂ ಉಪಾಧ್ಯಕ್ಷ ಸೆಲಿಸ್ತಿನ್ ಡಿಸೋಜಾ ಇವರ ಉಪಸ್ಥಿತಿಯಲ್ಲಿ ವಿತರಿಸಲಾಯಿತು ಹಾಗೂ ಇಲಾಖಾ ವತಿಯಿಂದ ನೀಡಲಾದ ಉಚಿತ ಪಠ್ಯಪುಸ್ತಕಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪೋಷಕರು, ಶಾಲಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ರಕ್ಷಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya
error: Content is protected !!