July 21, 2026
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ಪ್ರೇಮಿ, ಕಾರ್ಗಿಲ್ ವನದ ರೂವಾರಿ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರಾದ ಸಚಿನ್ ಭಿಡೆ ಮಾತನಾಡಿ ‘ ಪರಿಸರ ನಮ್ಮ ಜೀವನಾಡಿ. ಆದುದರಿಂದ ಪರಿಸರ ದಿನ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ಪೋಷಣೆಯ ಜವಾಬ್ದಾರಿ ಕೂಡ ನಮ್ಮದಾಗಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ “ನಾವೆಲ್ಲರೂ ಪರಿಸರ ಪ್ರೇಮಿ ಆಗಿರಬೇಕು. ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸೀಮಿತ ಆಗಿರದೆ ನಮ್ಮ ನಿರಂತರ ಕಾರ್ಯಕ್ರಮ ಆಗಬೇಕು “ಎಂದು ಹೇಳಿದರು.

ಪರಿಸರ ದಿನದ ಅಂಗವಾಗಿ ಕಾಲೇಜಿನ ಉಪನ್ಯಾಸಕರಿಗೆ ಹಾಗೂ ಸ್ವಯಂ ಸೇವಕರಿಗೆ ಗಿಡ ವಿತರಿಸಲಾಯಿತು. ಕಾಲೇಜು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಕನ್ನಡ ಉಪನ್ಯಾಸಕರಾದ ಸುಭಾಸ್ ರಾವ್ ಬೋಳೂರು, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕಿ ನವನೀತು ನಿರೂಪಿಸಿ ರಕ್ಷಿತ ಸ್ವಾಗತಿಸಿ ಪ್ರೀತಮ್ ವಂದಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya
error: Content is protected !!