23.1 C
ಪುತ್ತೂರು, ಬೆಳ್ತಂಗಡಿ
June 6, 2026
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಪ.ಪೂ.ಕಾಲೇಜು : ವಿಶ್ವ ಪರಿಸರ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪರಿಸರ ಪ್ರೇಮಿ, ಕಾರ್ಗಿಲ್ ವನದ ರೂವಾರಿ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರಾದ ಸಚಿನ್ ಭಿಡೆ ಮಾತನಾಡಿ ‘ ಪರಿಸರ ನಮ್ಮ ಜೀವನಾಡಿ. ಆದುದರಿಂದ ಪರಿಸರ ದಿನ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ಪೋಷಣೆಯ ಜವಾಬ್ದಾರಿ ಕೂಡ ನಮ್ಮದಾಗಬೇಕು” ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ “ನಾವೆಲ್ಲರೂ ಪರಿಸರ ಪ್ರೇಮಿ ಆಗಿರಬೇಕು. ಗಿಡಗಳನ್ನು ನೆಡುವುದು ಒಂದು ದಿನಕ್ಕೆ ಸೀಮಿತ ಆಗಿರದೆ ನಮ್ಮ ನಿರಂತರ ಕಾರ್ಯಕ್ರಮ ಆಗಬೇಕು “ಎಂದು ಹೇಳಿದರು.

ಪರಿಸರ ದಿನದ ಅಂಗವಾಗಿ ಕಾಲೇಜಿನ ಉಪನ್ಯಾಸಕರಿಗೆ ಹಾಗೂ ಸ್ವಯಂ ಸೇವಕರಿಗೆ ಗಿಡ ವಿತರಿಸಲಾಯಿತು. ಕಾಲೇಜು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಕನ್ನಡ ಉಪನ್ಯಾಸಕರಾದ ಸುಭಾಸ್ ರಾವ್ ಬೋಳೂರು, ಎನ್ ಎಸ್ ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್, ಸಹ ಯೋಜನಾಧಿಕಾರಿ ಶೋಭಾ ಪಿ ಉಪಸ್ಥಿತರಿದ್ದರು. ಸ್ವಯಂ ಸೇವಕಿ ನವನೀತು ನಿರೂಪಿಸಿ ರಕ್ಷಿತ ಸ್ವಾಗತಿಸಿ ಪ್ರೀತಮ್ ವಂದಿಸಿದರು.

Related posts

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!