September 5, 2026
ಕೃಷಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಪರಿಸರ ದಿನಾಚರಣೆ

ನಾರಾವಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಜೂನ್ 5ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ ಕುಮಾರ್ ಹೆಗಡೆ ನಾಮನಿರ್ದೇಶದ ಸದಸ್ಯರು ನಾರಾವಿ ಶಾಲೆ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಭಿಜಿತ್ ಜೈನ್ ಜನ ಸೇವಾ ಟ್ರಸ್ಟ್ ಇವರು ಇಂದಿನ ಕಾಲದಲ್ಲಿ ಪರಿಸರವನ್ನು ಉಳಿಸುವ ಅಗತ್ಯತೆಯ ಮಾಹಿತಿಯನ್ನು ಸವಿವರವಾಗಿ ತಿಳಿಸಿದರು. ಸುಧಾಕರ್ ಭಂಡಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಭಾಗವಹಿಸಿ ಪರಿಸರ ದಿನಾಚರಣೆಗೆ ಶುಭ ಕೋರಿದರು. ಪಿಡಿಓ ಸುಧಾಕರ್ ಸಸ್ಯ ಸಂಕುಲ, ಪ್ರಾಣಿ ಸಂಕುಲವನ್ನು ಉಳಿಸುವಲ್ಲಿ ಪರಿಸರದ ಮಹತ್ವವನ್ನು ವಿವರಿಸಿದರು. ಅರಣ್ಯ ಇಲಾಖೆಯ ಅರಣ್ಯ ಪಾಲಕರು ಮಹಾಂತೇಶ್ ಸಸ್ಯಗಳನ್ನು ನೆಡುವುದು ಅಲ್ಲದೆ ಅದನ್ನು ಪೋಷಿಸುವ ಜವಾಬ್ದಾರಿ ಕೂಡ ಅಷ್ಟೇ ಮುಖ್ಯ ಪರಿಸರ ಉಳಿಸಿದರೆ ನಾಡು ಉಳಿಯಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು.

ಮಂಜುನಾಥ್ ಅರಣ್ಯ ಪಾಲಕರು ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೊನಾಲ್ಟ್ ವಾಚರ್ ಪರಿಸರದ ಬಗ್ಗೆ ವಿಶೇಷ ಮಾಹಿತಿ ನೀಡಿದರು. ಪರಿಸರವನ್ನು ರಕ್ಷಿಸುವಲ್ಲಿ ಲೋಕೇಶ್ ಸಾವಯವ ಗೊಬ್ಬರದ ಮಾಹಿತಿಯನ್ನು ನೀಡಿದರು. ಅಲ್ಲದೆ ಗೊಬ್ಬರವನ್ನು ಉಚಿತವಾಗಿ ನೀಡಿ ನೆಟ್ಟಂತಹ ಸಸಿಗಳಿಗೆ ಇಂದು ಹಾಕಲಾಯಿತು. ಸುಶೀಲ ಹೆಗ್ಡೆ ಮುಖ್ಯೋಪಾಧ್ಯಾಯರು ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇವರು ಸ್ವಾಗತಿಸಿದರು. ಶಾರದಾ ಶಿಕ್ಷಕರು ಬಂದಂತಹ ಅತಿಥಿಗಳಿಗೆ ಧನ್ಯವಾದ ನೀಡಿದರು. ಜ್ಞಾನೇಶ್ವರಿ ಕಾರ್ಯಕ್ರಮ ನಿರೂಪಣೆಗೈದರು.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
error: Content is protected !!