July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.
ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.
ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇರುವುದಿಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವಾರು ಅವಾಂತರಗಳು ಸಂಭವಿಸಿದ್ದವು.ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಜರಿತ ಉಂಟಾಗಿಲ್ಲ.

ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು ಕೆಲವೊಂದು ಲಘು ಪ್ರಮಾಣದ ಜರಿತಗಳು ಉಂಟಾಗುತ್ತವೆ. ಆದರೆ ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ. ಈ ಬಾರಿ ಸಣ್ಣ ಪ್ರಮಾಣದ ಕುಸಿತ ಕಂಡುಬಂದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

Related posts

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya
error: Content is protected !!