September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

ಬೆಳ್ತಂಗಡಿ: ತೆಕ್ಕಾರಿನ ಯುವಕ ಗುರುಕಿರಣ್ ಅವರು ಭಾರತೀಯ ಸಶಸ್ತ್ರ ಪಡೆಗಳ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಇವರು ತೆಕ್ಕಾರು ಗ್ರಾಮದ ಮರಮ ಗುತ್ತು ಹೊಸಮನೆ ನಿವಾಸಿ ಉಮೇಶ್ ಪೂಜಾರಿ ಮತ್ತು ಶ್ರೀಮತಿ ರವರ ಪುತ್ರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆ ಪೆರಿಯೊಟ್ಟುನಲ್ಲಿ ಪೂರ್ಣಗೊಳಿಸಿ ಹಾಗೂ ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಉಪ್ಪಿನಂಗಡಿಯಲ್ಲಿ ಪೂರ್ಣಗೊಳಿಸಿದರು.

ಚಿಕ್ಕ ವಯಸ್ಸಿನಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆಯನ್ನು ಪೂರೈಸಲು ತರಬೇತಿಗಾಗಿ ಮಂಗಳೂರಿನ “ವೀರ ರಾಣಿ ಅಬ್ಬಕ್ಕ ಸೇನಾ ” ತರಬೇತಿ ಶಾಲೆಯಲ್ಲಿ 4 ತಿಂಗಳ ತರಬೇತಿಯಿಂದ ಪ್ರಾರಂಭಿಸಿದರು. ಇವರ ಸತತವಾಗಿ 3 ವರ್ಷದ ಕಠಿಣ ಪರಿಶ್ರಮ. ಶಿಸ್ತು ಹಾಗೂ ದೃಢ ಸಂಕಲ್ಪದ ಮೂಲಕ ಈ ಮಹತ್ತರ ಸಾಧನೆಯನ್ನು ಗಳಿಸಿದ್ದಾರೆ.

Related posts

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು

Suddi Udaya
error: Content is protected !!