July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

ಬೆಳ್ತಂಗಡಿ: ತೆಕ್ಕಾರಿನ ಯುವಕ ಗುರುಕಿರಣ್ ಅವರು ಭಾರತೀಯ ಸಶಸ್ತ್ರ ಪಡೆಗಳ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಇವರು ತೆಕ್ಕಾರು ಗ್ರಾಮದ ಮರಮ ಗುತ್ತು ಹೊಸಮನೆ ನಿವಾಸಿ ಉಮೇಶ್ ಪೂಜಾರಿ ಮತ್ತು ಶ್ರೀಮತಿ ರವರ ಪುತ್ರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆ ಪೆರಿಯೊಟ್ಟುನಲ್ಲಿ ಪೂರ್ಣಗೊಳಿಸಿ ಹಾಗೂ ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಉಪ್ಪಿನಂಗಡಿಯಲ್ಲಿ ಪೂರ್ಣಗೊಳಿಸಿದರು.

ಚಿಕ್ಕ ವಯಸ್ಸಿನಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಮಹದಾಸೆಯನ್ನು ಪೂರೈಸಲು ತರಬೇತಿಗಾಗಿ ಮಂಗಳೂರಿನ “ವೀರ ರಾಣಿ ಅಬ್ಬಕ್ಕ ಸೇನಾ ” ತರಬೇತಿ ಶಾಲೆಯಲ್ಲಿ 4 ತಿಂಗಳ ತರಬೇತಿಯಿಂದ ಪ್ರಾರಂಭಿಸಿದರು. ಇವರ ಸತತವಾಗಿ 3 ವರ್ಷದ ಕಠಿಣ ಪರಿಶ್ರಮ. ಶಿಸ್ತು ಹಾಗೂ ದೃಢ ಸಂಕಲ್ಪದ ಮೂಲಕ ಈ ಮಹತ್ತರ ಸಾಧನೆಯನ್ನು ಗಳಿಸಿದ್ದಾರೆ.

Related posts

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya
error: Content is protected !!