ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಸೇನೆ ಅಗ್ನಿವೀರ್ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ.
ರಂಜಿತ್ ಅವರು ಲಾಯಿಲ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಉಪ್ಪಿನಂಗಡಿ ಶ್ರೀರಾಮ ಪ್ರೌಢ ಶಾಲೆ ರಾಮನಗರದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ. ಬಳಿಕ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದಾರೆ. ಬಾಲ್ಯದಲ್ಲೇ ಭಾರತೀಯ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದ ರಂಜಿತ್ ಈಗ ಅಗ್ನಿವೀರ್ಗೆ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಹಾಗೂ ಶ್ರೀಮತಿ ಪುಷ್ಪಾವತಿ ಅವರ ಪುತ್ರ.












