22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ.

ರಂಜಿತ್ ಅವರು ಲಾಯಿಲ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಉಪ್ಪಿನಂಗಡಿ ಶ್ರೀರಾಮ ಪ್ರೌಢ ಶಾಲೆ ರಾಮನಗರದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ. ಬಳಿಕ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದ ರಂಜಿತ್ ಈಗ ಅಗ್ನಿವೀರ್‌ಗೆ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಹಾಗೂ ಶ್ರೀಮತಿ ಪುಷ್ಪಾವತಿ ಅವರ ಪುತ್ರ.

Related posts

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!