September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

ಮಚ್ಚಿನ: ಇಲ್ಲಿಯ ಸರಕಾರಿ ಶಾಲೆಯ ಹತ್ತಿರ ಇರುವ ಕಿರಿಯ ಆರೋಗ್ಯ ಸಹಾಯಕಿ ಉಪ ಕೇಂದ್ರದ ವಸತಿಗೃಹ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ಆರೋಗ್ಯ ಸಹಾಯಕಿಯರು ರಾತ್ರಿ ಹಗಲು ಎನ್ನದೆ ಈ ಕಟ್ಟಡದಲ್ಲಿ ಜನರಿಗೆ ಸೇವೆಯನ್ನು ನೀಡುತ್ತಿದ್ದರು ಆದರೆ ಮಚ್ಚಿನ ಗ್ರಾಮಕ್ಕೆ ಸರಕಾರಿ ಆಸ್ಪತ್ರೆಯ ಮಂಜೂರುಗೊಂಡು ಗ್ರಾಮ ಪಂಚಾಯತಿಯ ಕಿರಿದಾದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಇತ್ತೀಚೆಗೆ ಗ್ರಾಮ ಪಂಚಾಯತಿ ಆರೋಗ್ಯ ಇಲಾಖೆ, ಊರ ಜನರ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ನೂತನ ಕಟ್ಟಡದ ಮಂಜೂರುಗೊಂಡು ಕಟ್ಟಡದ ಕೆಲಸಗಳು ಪೂರ್ಣಗೊಂಡು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಆದರೆ ಈ ಹಳೆಯ ಕಟ್ಟಡದ ಬಾಗಿಲುಗಲು ತುಕ್ಕು ಹಿಡಿದು ಹೋಗಿದ್ದು ಇದರ ಒಳಗಿರುವ ವಸ್ತುಗಳು ನೀರಿನ ಟ್ಯಾಂಕಿ, ಕಪಾಟುಗಳು, ಮೇಜುಗಳು ಇನ್ನಿತರ ವಸ್ತುಗಳು ಕಳ್ಳರ ಪಾಲಾಗುತ್ತಿದೆ. ಅದಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಈ ಕಟ್ಟಡದ ಸುತ್ತಮುತ್ತ ಪೊದೆ ಬಳ್ಳಿಗಳು ತುಂಬಿ ಕಟ್ಟಡ ಮಾಯವಾಗುವಂತಿದೆ. ಮೂಲಸೌಕರ್ಯಗಳನ್ನು ಒಳಗೊಂಡ ಈ ಕಟ್ಟಡ ಮಳೆಗೆ ನೆಲಸಮಗೊಳ್ಳುವ ಮುನ್ನ ಆರೋಗ್ಯ ಇಲಾಖೆ ಇತ್ತ ಗಮನ ಹರಿಸಿ ಈ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
✍️ ವರದಿ: ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
error: Content is protected !!