22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

ಮಚ್ಚಿನ: ಇಲ್ಲಿಯ ಸರಕಾರಿ ಶಾಲೆಯ ಹತ್ತಿರ ಇರುವ ಕಿರಿಯ ಆರೋಗ್ಯ ಸಹಾಯಕಿ ಉಪ ಕೇಂದ್ರದ ವಸತಿಗೃಹ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡು ಆರೋಗ್ಯ ಸಹಾಯಕಿಯರು ರಾತ್ರಿ ಹಗಲು ಎನ್ನದೆ ಈ ಕಟ್ಟಡದಲ್ಲಿ ಜನರಿಗೆ ಸೇವೆಯನ್ನು ನೀಡುತ್ತಿದ್ದರು ಆದರೆ ಮಚ್ಚಿನ ಗ್ರಾಮಕ್ಕೆ ಸರಕಾರಿ ಆಸ್ಪತ್ರೆಯ ಮಂಜೂರುಗೊಂಡು ಗ್ರಾಮ ಪಂಚಾಯತಿಯ ಕಿರಿದಾದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಇತ್ತೀಚೆಗೆ ಗ್ರಾಮ ಪಂಚಾಯತಿ ಆರೋಗ್ಯ ಇಲಾಖೆ, ಊರ ಜನರ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ನೂತನ ಕಟ್ಟಡದ ಮಂಜೂರುಗೊಂಡು ಕಟ್ಟಡದ ಕೆಲಸಗಳು ಪೂರ್ಣಗೊಂಡು ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಆದರೆ ಈ ಹಳೆಯ ಕಟ್ಟಡದ ಬಾಗಿಲುಗಲು ತುಕ್ಕು ಹಿಡಿದು ಹೋಗಿದ್ದು ಇದರ ಒಳಗಿರುವ ವಸ್ತುಗಳು ನೀರಿನ ಟ್ಯಾಂಕಿ, ಕಪಾಟುಗಳು, ಮೇಜುಗಳು ಇನ್ನಿತರ ವಸ್ತುಗಳು ಕಳ್ಳರ ಪಾಲಾಗುತ್ತಿದೆ. ಅದಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.

ಈ ಕಟ್ಟಡದ ಸುತ್ತಮುತ್ತ ಪೊದೆ ಬಳ್ಳಿಗಳು ತುಂಬಿ ಕಟ್ಟಡ ಮಾಯವಾಗುವಂತಿದೆ. ಮೂಲಸೌಕರ್ಯಗಳನ್ನು ಒಳಗೊಂಡ ಈ ಕಟ್ಟಡ ಮಳೆಗೆ ನೆಲಸಮಗೊಳ್ಳುವ ಮುನ್ನ ಆರೋಗ್ಯ ಇಲಾಖೆ ಇತ್ತ ಗಮನ ಹರಿಸಿ ಈ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
✍️ ವರದಿ: ಹರ್ಷ ಬಳ್ಳಮಂಜ

Related posts

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
error: Content is protected !!