September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನುಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಳ ವಿಭಾಗದ ಮುಖ್ಯಸ್ಥ ಪುರಂದರ ಭಟ್ ಮಾತನಾಡಿ ಪರಿಸರಕ್ಕೆ ನಾವು ಅನಿವಾರ್ಯವಲ್ಲ.ನಮಗೆ ಪರಿಸರ ಮುಖ್ಯ. ಪರಿಸರವನ್ನು ನಾವು ಚೆನ್ನಾಗಿ ನೋಡಿಕೊಂಡರೆ ನಾವು ಚೆನ್ನಾಗಿ ಇರುತ್ತೇವೆ. ಮನುಷ್ಯ ತನ್ನ ಅತಿ ಆಸೆಯಿಂದ ಪ್ರಕೃತಿ ನಾಶಗೊಳಿಸುತ್ತಿದ್ದಾನೆ. ಪರಿಣಾಮವಾಗಿ ಪ್ರಕೃತಿ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಾದ ನೀವು ಪರಿಸರವನ್ನು ಪ್ರೀತಿಸಿ, ಪರಿಸರ ಪ್ರೇಮಿಗಳಾಗಿ ಬಾಳಿ ಬದುಕಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶೋಭಾ ಇವರು ಅತಿಥಿಗಳ ಪರಿಚಯ ಓದಿದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕ ಜೋಸೆಫ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಶಿಕ್ಷಕ ಶೇಖರ್ ಗೌಡ ಸ್ವಾಗತಿಸಿ, ಶಿಕ್ಷಕಿ ಕೇಶವತಿ ಕೆ ವಂದಿಸಿದರು. ಶಿಕ್ಷಕಿ ಶ್ರೀಜಾ ಎ ಕಾರ್ಯಕ್ರಮ ನಿರ್ವಹಿಸಿದರು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya
error: Content is protected !!