September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.
ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.
ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇರುವುದಿಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವಾರು ಅವಾಂತರಗಳು ಸಂಭವಿಸಿದ್ದವು.ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಜರಿತ ಉಂಟಾಗಿಲ್ಲ.

ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು ಕೆಲವೊಂದು ಲಘು ಪ್ರಮಾಣದ ಜರಿತಗಳು ಉಂಟಾಗುತ್ತವೆ. ಆದರೆ ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ. ಈ ಬಾರಿ ಸಣ್ಣ ಪ್ರಮಾಣದ ಕುಸಿತ ಕಂಡುಬಂದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

Related posts

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya
error: Content is protected !!