25.8 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗದ ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ ಉಂಟಾಗಿದೆ.
ದೂರದ ಅರಣ್ಯ ಪ್ರದೇಶದಲ್ಲಿ ಗುಡ್ಡ ಹಾಗೂ ಕಲ್ಲುಗಳು ಜರಿದು ಬಿದ್ದಿದ್ದು ಇದನ್ನು ಸುಮಾರು ಒಂದು ಕಿ.ಮೀ.ದೂರದಲ್ಲಿರುವ ಪರಿಸರದ ಜನರು ಕಂಡಿದ್ದಾರೆ.
ಈ ಅರಣ್ಯ ಪ್ರದೇಶದಲ್ಲಿ ಯಾವುದೇ ಜನ ವಾಸ್ತವ್ಯ ಇರುವುದಿಲ್ಲ. 2019ರ ನೆರೆ ಸಂದರ್ಭದಲ್ಲಿ ಬಂಡಾಜೆ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ ಹಲವಾರು ಅವಾಂತರಗಳು ಸಂಭವಿಸಿದ್ದವು.ಈ ನೆನಪು ಇನ್ನೂ ತಾಲೂಕಿನ ಜನರಲ್ಲಿ ಹಸಿರಾಗಿದೆ. ಪ್ರಸ್ತುತ ಅಂತಹ ದೊಡ್ಡ ಪ್ರಮಾಣದ ಜರಿತ ಉಂಟಾಗಿಲ್ಲ.

ಬಂಡಾಜೆ ಅರಣ್ಯದಲ್ಲಿ ಇಂತಹ ಲಘು ಪ್ರಮಾಣದ ಕುಸಿತಗಳು ಮಳೆ ಸಂದರ್ಭ ಆಗಾಗ ನಡೆಯುತ್ತಿರುತ್ತವೆ. ಮಳೆಗಾಲ ಆರಂಭಕ್ಕೆ ಗುಡ್ಡ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವುದು ಸಾಮಾನ್ಯವಾಗಿದ್ದು ಕೆಲವೊಂದು ಲಘು ಪ್ರಮಾಣದ ಜರಿತಗಳು ಉಂಟಾಗುತ್ತವೆ. ಆದರೆ ಇದರಿಂದ ಯಾವುದೇ ಅಪಾಯಕಾರಿ ಸನ್ನಿವೇಶ ಉಂಟಾಗುವುದಿಲ್ಲ. ಈ ಬಾರಿ ಸಣ್ಣ ಪ್ರಮಾಣದ ಕುಸಿತ ಕಂಡುಬಂದಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.

Related posts

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya
error: Content is protected !!