24.2 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ವನ್ಯ ಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ಅವರು ಮಾತನಾಡಿ, ‘ಪ್ರಕೃತಿಯನ್ನು ಸ್ವಚ್ಚವಾಗಿಸುವುದು ನಮ್ಮ ಜವಾಬ್ದಾರಿ. ಪರಿಸರ ಉತ್ತವಾಗಿದ್ದಷ್ಟು ನಮ್ಮ ಆರೋಗ್ಯವೂ ಉತ್ತಮವಾಗಿರಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಕೃತಿಯನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದರು.

ಸಂಪನ್ಮೂಲ ವ್ಯಕ್ತಿ ಉಪ ವಲಯ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯೂ ಮಾತನಾಡಿ, ‘ಪ್ರಕೃತಿ ದೇವರ ಕೊಡುಗೆ. ಮನುಷ್ಯನ ಆಲೋಚನೆಗಳಿಗೆ ನಿಲುಕದ ಸೃಷ್ಟಿ ವೈಭವ ಈ ಪ್ರಕೃತಿಯಲ್ಲಿದೆ. ಅರಣ್ಯ, ಜಲ, ಮಣ್ಣು, ವಾತಾವರಣದ ರಕ್ಷಣೆ ಮಾಡಬೇಕು. ಪ್ರತಿ ವರ್ಷ ವ್ಯಕ್ತಿಯೋರ್ವ ಒಂದು ಗಿಡ ನೆಟ್ಟು ಪೋಷಿಸಬೇಕು. ಈ ಪ್ರಕೃತಿಯಲ್ಲಿರುವ ಎಲ್ಲಾ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸಬೇಕಾಗಿದೆ. ನೀರಿನ ಸದ್ಭಳಕೆ ಮಾಡಬೇಕಾದುದು ನಮ್ಮ ಜವಾಬ್ದಾರಿಯಾಗಿದೆ’ ಎಂದರು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಇದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ, ಅರಣ್ಯ ಇಲಾಖೆಯ ಸಿಬ್ಬಂದಿ ಸುರೇಶ್ ಹಾಗೂ ವಿದ್ಯಾರ್ಥಿಗಳು ಇದ್ದರು.

ವಿದ್ಯಾರ್ಥಿನಿಯರಾದ ರಕ್ಷಿತಾ, ಶ್ವೇತಾ ಹಾಗೂ ಮೇಘನಾ ಪ್ರಾರ್ಥಿಸಿದರು. ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ ಶಿರ್ಲಾಲು ವಂದಿಸಿದರು.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!