24.1 C
ಪುತ್ತೂರು, ಬೆಳ್ತಂಗಡಿ
September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ.

ರಂಜಿತ್ ಅವರು ಲಾಯಿಲ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಉಪ್ಪಿನಂಗಡಿ ಶ್ರೀರಾಮ ಪ್ರೌಢ ಶಾಲೆ ರಾಮನಗರದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ. ಬಳಿಕ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದ ರಂಜಿತ್ ಈಗ ಅಗ್ನಿವೀರ್‌ಗೆ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಹಾಗೂ ಶ್ರೀಮತಿ ಪುಷ್ಪಾವತಿ ಅವರ ಪುತ್ರ.

Related posts

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!