25.8 C
ಪುತ್ತೂರು, ಬೆಳ್ತಂಗಡಿ
June 5, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶವಾದ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ರಂಜಿತ್ ಅವರು ಆಯ್ಕೆಯಾಗಿದ್ದಾರೆ.

ರಂಜಿತ್ ಅವರು ಲಾಯಿಲ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಉಪ್ಪಿನಂಗಡಿ ಶ್ರೀರಾಮ ಪ್ರೌಢ ಶಾಲೆ ರಾಮನಗರದಲ್ಲಿ ಪ್ರೌಢ ಶಿಕ್ಷಣ ಪಡೆದಿದ್ದಾರೆ. ಬಳಿಕ ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ. ವಿದ್ಯಾರ್ಥಿ ಜೀವನದಲ್ಲಿ ಸೇನೆಗೆ ಸೇರುವ ಆಸಕ್ತಿ ಹೊಂದಿದ್ದ ರಂಜಿತ್ ಈಗ ಅಗ್ನಿವೀರ್‌ಗೆ ಆಯ್ಕೆಯಾಗಿದ್ದಾರೆ. ಇವರು ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಹಾಗೂ ಶ್ರೀಮತಿ ಪುಷ್ಪಾವತಿ ಅವರ ಪುತ್ರ.

Related posts

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!