September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. 

ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ 
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ 
ಕುಮಾರ್ ಉಪಸ್ಥಿತರಿದ್ದರು.

ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 
ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ 
ವ್ಯಕ್ತಪಡಿಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya
error: Content is protected !!