24.3 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷ 1ನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಪುಟ್ಟ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು .

ಮುಖ್ಯ ಅತಿಥಿಗಳಾಗಿ ಕೃಷ್ಣಶೆಟ್ಟಿ ನಿವೃತ್ತ ಪಾಲಕರು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆ ಮತ್ತು ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಆಗಮಿಸಿದ್ದರು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. 5, 6 ಮತ್ತು 7 ತರಗತಿಯ ವಿದ್ಯಾರ್ಥಿಗಳಿಗೆ ಲೇಖನಿಯನ್ನು ವಿತರಿಸಲಾಯಿತು

ಮುಖ್ಯ ಅತಿಥಿಗಳು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ಅಸಾಧಾರಣ ಸಾಮರ್ಥ್ಯವನ್ನು ಪ್ರಕಟಿಸಿ ಶಾಲೆಗೆ ಕೀರ್ತಿಯನ್ನು ತರುವಂತವರಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ನಾಯ್ಕ ವಹಿಸಿಕೊಂಡಿದ್ದರು.

ರೇವತಿ ಸ್ವಾಗತಿಸಿದರು. ಶ್ರೀಮತಿ ಅಶ್ವಿನಿ ಧನ್ಯವಾದವಿತ್ತರು. ಕುಸಪ್ಪಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya
error: Content is protected !!