September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ಉಜಿರೆ ಇವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಶಾಲೆಯ ಅವರಣಕ್ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ಇವರು ಸುಮಾರು ಮೂರುವರೆ ಲಕ್ಷ ವೆಚ್ಚದಲ್ಲಿ ಇಂಟರ್ಲಾಕ್ ವ್ಯವಸ್ಥೆಯನ್ನು ಉಚಿತವಾಗಿ ಅಳವಡಿಸಿ ಶಾಲಾ ಪೋಷಕರ ಹಾಗೂ ವಿದ್ಯಾಭಿಮಾನಿಗಳ ಪ್ರೀತಿಗೆ ಪಾತ್ರರಾದರು. ಶಾಲಾ ಆರಂಭೋತ್ಸವದ ಶುಭವಸರದಲ್ಲಿ ಶಾಲೆಯಲ್ಲಿ ಇವರ ಕೊಡುಗೆಗೆ ಕಿರು ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಎಸ್. ಡಿ. ಎಂ. ಸಿ. ಅಧ್ಯಕ್ಷ ಜನಾರ್ಧನ ನಾಯ್ಕ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ, ಸಹ ಶಿಕ್ಷಕಿ ಶ್ರೀಮತಿ ಸುಜಾತ, ಸಂಧ್ಯಾ ಜೈನ್, ಪೋಷಕರು, ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya
error: Content is protected !!