22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

ಮಂಗಳೂರು: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ಜೂ.5ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು.

ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳಿಗೆ ಭೇಟಿ ನೀಡಿ ಸಂಘಟನಾ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಜಿಲ್ಲೆಗೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಭಾರತೀಯ ಮಜ್ದೂರ್ ಸಂಘದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟಿçÃಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯವಾಹಕ ಪ್ರಕಾಶ್ ಪಿ.ಎಸ್., ಭಾರತೀಯ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ರೋಹಿತಾಶ್ವ ಉಪಸ್ಥಿತರಿದ್ದರು.

ಜಿಲ್ಲಾ ಭೇಟಿಯ ಸಂದರ್ಭದಲ್ಲಿ ರಾಧಾಕೃಷ್ಣನ್ ಅವರು ಭಾರತೀಯ ಮಜ್ದೂರ್ ಸಂಘದ ಸಂಯೋಜಿತ ಯೂನಿಯನ್‌ಗಳ ಕಚೇರಿಗಳಿಗೆ ಭೇಟಿ ನೀಡಿ ಅವುಗಳ ಆಡಳಿತಾತ್ಮಕ ಹಾಗೂ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಯೂನಿಯನ್‌ಗಳ ದಾಖಲಾತಿಗಳ ಸಮರ್ಪಕ ನಿರ್ವಹಣೆ, ಸದಸ್ಯತ್ವ ನೋಂದಣಿ, ರಿಜಿಸ್ಟರ್‌ಗಳ ಪಾಲನೆ, ಲೆಕ್ಕಪತ್ರಗಳ ನಿರ್ವಹಣೆ, ವಾರ್ಷಿಕ ವರದಿಗಳ ಸಲ್ಲಿಕೆ, ಅಫಿಲಿಯೇಷನ್ ನವೀಕರಣ ಹಾಗೂ ಭಾರತೀಯ ಮಜ್ದೂರ್ ಸಂಘದ ನಿಯಮಾವಳಿಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಜೂನ್ ೭ರಂದು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲೆಯ ಸಂಘಟನಾ ಬೆಳವಣಿಗೆ, ಕಾರ್ಮಿಕರ ಸಮಸ್ಯೆಗಳು, ಸಂಯೋಜಿತ ಯೂನಿಯನ್‌ಗಳ ಕಾರ್ಯವೈಖರಿ ಹಾಗೂ ಮುಂದಿನ ಸಂಘಟನಾ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

Related posts

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!