July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ  ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.  

ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ ಸವಣಾಲು ಹಾಗೂ ತೋಟಗಾರಿಕೆಯ ಹಿರಿಯ ಸಹಾಯಕ ನಿದೇರ್ಶಕ ಚಂದ್ರಶೇಖರ್, ಪುತ್ತೂರಿನ ಪ್ರಗತಿಪರ ಕಾಳುಮೆಣಸು ಬೆಳೆಗಾರ ರಾಷ್ಟ್ರಪ್ರಶಸ್ತಿ ವಿಜೇತ ಸುರೇಶ್ ಬಲ್ನಾಡ್ ಹಾಗೂ ಸೂರ್ಯ ಪ್ರಗತಿಪರ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಭಾಕರ ಮಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರಾಧಾ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ., ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ ಹಾಗೂ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿದೇರ್ಶಕಿ ಪ್ರೇಮಾ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್ ಸ್ವಾಗತಿಸಿ, ನಿರ್ದೇಶಕ ಮುನಿರಾಜ ಅಜ್ರಿ ವಂದಿಸಿ,  ಯತೀಶ್ ಗೌಡ ಕಂಗಿತ್ತಿಲು ನಿರೂಪಿಸಿದರು. ರೈತಾಪಿ ವರ್ಗದವರು ಭಾಗವಹಿಸಿದ್ದರು.

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಬೆಳ್ತಂಗಡಿ- ಕೋರ್ಟು ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿ ಮುಚ್ಚಿದ ನ.ಪಂ.

Suddi Udaya
error: Content is protected !!