24.3 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ  ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.  

ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ ಸವಣಾಲು ಹಾಗೂ ತೋಟಗಾರಿಕೆಯ ಹಿರಿಯ ಸಹಾಯಕ ನಿದೇರ್ಶಕ ಚಂದ್ರಶೇಖರ್, ಪುತ್ತೂರಿನ ಪ್ರಗತಿಪರ ಕಾಳುಮೆಣಸು ಬೆಳೆಗಾರ ರಾಷ್ಟ್ರಪ್ರಶಸ್ತಿ ವಿಜೇತ ಸುರೇಶ್ ಬಲ್ನಾಡ್ ಹಾಗೂ ಸೂರ್ಯ ಪ್ರಗತಿಪರ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಭಾಕರ ಮಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರಾಧಾ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ., ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ ಹಾಗೂ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿದೇರ್ಶಕಿ ಪ್ರೇಮಾ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್ ಸ್ವಾಗತಿಸಿ, ನಿರ್ದೇಶಕ ಮುನಿರಾಜ ಅಜ್ರಿ ವಂದಿಸಿ,  ಯತೀಶ್ ಗೌಡ ಕಂಗಿತ್ತಿಲು ನಿರೂಪಿಸಿದರು. ರೈತಾಪಿ ವರ್ಗದವರು ಭಾಗವಹಿಸಿದ್ದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!