July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ದಿನಾಚರಣೆಯನ್ನು ವಿಜ್ಞಾನ ಹಾಗೂ ಗಣಿತ ಸಂಘಗಳಿಂದ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿಯಾದ ರಾಘವೇಂದ್ರ ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ವಿದ್ಯಾರ್ಥಿಯು ಅಮ್ಮನ ಹೆಸರಿನಲ್ಲಿ ಒಂದು ಗಿಡವನ್ನು ನೆಡಬೇಕೆಂಬುದನ್ನು ತಿಳಿಸಿದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಜಸಿಂತ ಉಪಸ್ಥಿತರಿದ್ದರು.

ಶಿಕ್ಷಕ ಶಿಕ್ಷಕಿಯರಾದ ನಯನ, ಪ್ರಮೀಳಾ ಎನ್, ವಾಗ್ದೇವಿ, ಸದಾನಂದ, ಸಮತಾ ಇವರ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಿರೂಪಣೆಯನ್ನು ಆದ್ಯ ಜೈನ್ , ಸ್ವಾಗತವನ್ನು ಶ್ರೀವಿನಿತ್, ಧನ್ಯವಾದವನ್ನು ತ್ರಿಶಾಲಿ ನೆರವೇರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!