23.7 C
ಪುತ್ತೂರು, ಬೆಳ್ತಂಗಡಿ
June 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಜೂ.5 ರಂದು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು.ದೇವಾಲಯದ ಕೆಲಸದ ವೇಳೆ ಕಲ್ಲನ್ನು ತೆಗೆದುಕೊಂಡು ರಿವರ್ಸ್ ಹೋಗುವ ವೇಳೆ ಎಡವಿ ಬಿದ್ದು ಕ್ರೇನ್‌ಗೆ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!