22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷ 1ನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಪುಟ್ಟ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು .

ಮುಖ್ಯ ಅತಿಥಿಗಳಾಗಿ ಕೃಷ್ಣಶೆಟ್ಟಿ ನಿವೃತ್ತ ಪಾಲಕರು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆ ಮತ್ತು ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಆಗಮಿಸಿದ್ದರು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. 5, 6 ಮತ್ತು 7 ತರಗತಿಯ ವಿದ್ಯಾರ್ಥಿಗಳಿಗೆ ಲೇಖನಿಯನ್ನು ವಿತರಿಸಲಾಯಿತು

ಮುಖ್ಯ ಅತಿಥಿಗಳು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ಅಸಾಧಾರಣ ಸಾಮರ್ಥ್ಯವನ್ನು ಪ್ರಕಟಿಸಿ ಶಾಲೆಗೆ ಕೀರ್ತಿಯನ್ನು ತರುವಂತವರಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ನಾಯ್ಕ ವಹಿಸಿಕೊಂಡಿದ್ದರು.

ರೇವತಿ ಸ್ವಾಗತಿಸಿದರು. ಶ್ರೀಮತಿ ಅಶ್ವಿನಿ ಧನ್ಯವಾದವಿತ್ತರು. ಕುಸಪ್ಪಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಮರದಿಂದ ಬಿದ್ದು ಸಾವು

Suddi Udaya
error: Content is protected !!