22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಕುತ್ಯಾರು ವಠಾರದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂಕಿತ್, ಕು. ದೃತಿ ಗೌಡ, ಧ್ರುವ ಸಿ. ಗೌಡ, ಕು.ಶ್ರೇಯ ಗೌಡ ಹಾಗೂ ಪ್ರದ್ಯೋತ್ ರಾವ್ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಚಿನ್ಮಯ್ ಹಾಗೂ ಕು.ನೇಹಾ ಕೃಷ್ಣ ಟಿ. ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ ರಾಧಾಕೃಷ್ಣ ಟಿ. ಅವರಿಗೆ ವಿಶೇಷ ಗೌರವ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ನಗರ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್ ಹಾಗೂ ಅಳದಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ. ಸನ್ನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಧಕರನ್ನು ಅಭಿನಂದಿಸಿ ಶುಭ ಹಾರೈಸಿದರು.


ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕರಾದ ಪ್ರದೀಪ್, ಅಂಕಿತ್, ಉದಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಅಶೋಕ್ ಶೆಟ್ಟಿ, ನಿಲಯ ಪಾಲಕರ ಸಂಘದ ಲೋಕೇಶ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಉಪನ್ಯಾಸಕರಾದ ಗಣೇಶ್ ಭಟ್, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್, ಬೆಳ್ತಂಗಡಿ ಅರಣ್ಯ ಇಲಾಖೆಯ ರವೀಂದ್ರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕುತ್ಯಾರು ವಠಾರದ ಬಂಧುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!