ಬೆಳ್ತಂಗಡಿ: ಕುತ್ಯಾರು ವಠಾರದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂಕಿತ್, ಕು. ದೃತಿ ಗೌಡ, ಧ್ರುವ ಸಿ. ಗೌಡ, ಕು.ಶ್ರೇಯ ಗೌಡ ಹಾಗೂ ಪ್ರದ್ಯೋತ್ ರಾವ್ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಚಿನ್ಮಯ್ ಹಾಗೂ ಕು.ನೇಹಾ ಕೃಷ್ಣ ಟಿ. ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ ರಾಧಾಕೃಷ್ಣ ಟಿ. ಅವರಿಗೆ ವಿಶೇಷ ಗೌರವ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ನ ನಿಕಟಪೂರ್ವ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್ ಹಾಗೂ ಅಳದಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ. ಸನ್ನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಧಕರನ್ನು ಅಭಿನಂದಿಸಿ ಶುಭ ಹಾರೈಸಿದರು.
ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕರಾದ ಪ್ರದೀಪ್, ಅಂಕಿತ್, ಉದಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಅಶೋಕ್ ಶೆಟ್ಟಿ, ನಿಲಯ ಪಾಲಕರ ಸಂಘದ ಲೋಕೇಶ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಉಪನ್ಯಾಸಕರಾದ ಗಣೇಶ್ ಭಟ್, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್, ಬೆಳ್ತಂಗಡಿ ಅರಣ್ಯ ಇಲಾಖೆಯ ರವೀಂದ್ರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕುತ್ಯಾರು ವಠಾರದ ಬಂಧುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.












