23.5 C
ಪುತ್ತೂರು, ಬೆಳ್ತಂಗಡಿ
June 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತಿಲ: ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪ್ಪಿನಂಗಡಿಯ ಮದರ್ ಗೋಲ್ಡ್ ಮಾಲಕ ಮಹಮ್ಮದ್ ಸಿರಾಜುದ್ದೀನ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರ ಸಂರಕ್ಷಣೆ ಒಬ್ಬರ ಕೆಲಸವಲ್ಲ ಅದು ಎಲ್ಲರ ಕೆಲಸ ಮತ್ತು ನಿತ್ಯವೂ ಮಾಡುವ ಕರ್ತ್ಯವಾಗಬೇಕು. ಆಗ ಪರಿಸರ ಸಂರಕ್ಷಣೆ ಖಂಡಿತಾ ಆಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ವಹಿಸಿ ಮಾತನಾಡಿ ಭೂಮಿ ನಮ್ಮನ್ನು ಸಲವುಹ ತಾಯಿ ಅದು ನಿತ್ಯ ಸೌಂದರ್ಯದಿAದ ಕೂಡಿರಬೇಕು. ಭೂಮಿಯ ಸೌಂದರ್ಯವೆAದರೆ ಹಸಿರು ಮತ್ತು ಜೀವವೈವಿದ್ಯತೆ. ಅದಕ್ಕಾಗಿ ನಾವು ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಭೂಮಿಯನ್ನು ರಕ್ಷಿಸುವ ಕೆಲಸಮಾಡಬೇಕೆಂದರು.

ಶಿಕ್ಷಕರಾದ ಸೆವ್ರಿನ್ ಮಾರ್ಟಿಸ್ ಸ್ವಾಗತಿಸಿದರು. ಇಕೋ ಕ್ಲಬ್ ನೋಡಲ್ ಶಿಕ್ಷಕ ಮಹೇಂದ್ರ ಪೂಜಾರಿ ಇಕೋ ಕ್ಲಬ್ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಕಿ ಗೀತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಶಾಲಾ ವಠಾರದಲ್ಲಿ ವಿವಿಧ ಗಿಡಗಳನ್ನು ನೆಟ್ಟರು. ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ತುಳಸಿ, ಹರ್ಷಿತ ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!