September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ ಇಲ್ಲಿ ದಾನಿಗಳು ಕೊಡ ಮಾಡಿದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲಾ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಪ್ರಕಾಶ್ ಪಾದೆಮನೆ, ವಿನುತಾ ಪ್ರಕಾಶ್, ವಿಮಲಾ ರಾಜು ಪೂಜಾರಿ ಇವರು ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾವು ಉಚಿತವಾಗಿ ಕೊಡಮಾಡಿದ ಪುಸ್ತಕಗಳನ್ನು ಅಂಗನವಾಡಿ ಮಕ್ಕಳಿಗೆ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ವಿನುತಾ ಪ್ರಕಾಶ್ ಇವರು ವಿದ್ಯಾರ್ಥಿಗಳು ತಮಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಕಲಿತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜ್ಯೋತಿ ಸಹಾಯಕಿ ಶ್ರೀಮತಿ ಶ್ವೇತಾ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಕು. ಅರ್ಪಿತಾ ಸ್ವಾಗತಿಸಿದರು. ಶಿಕ್ಷಕ ಸಹಶಿಕ್ಷಕ ಗಣರಾಜ್ ನಿರೂಪಿಸಿ ವಂದಿಸಿದರು.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!