July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ ಇಲ್ಲಿ ದಾನಿಗಳು ಕೊಡ ಮಾಡಿದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲಾ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಪ್ರಕಾಶ್ ಪಾದೆಮನೆ, ವಿನುತಾ ಪ್ರಕಾಶ್, ವಿಮಲಾ ರಾಜು ಪೂಜಾರಿ ಇವರು ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾವು ಉಚಿತವಾಗಿ ಕೊಡಮಾಡಿದ ಪುಸ್ತಕಗಳನ್ನು ಅಂಗನವಾಡಿ ಮಕ್ಕಳಿಗೆ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ವಿನುತಾ ಪ್ರಕಾಶ್ ಇವರು ವಿದ್ಯಾರ್ಥಿಗಳು ತಮಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಕಲಿತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜ್ಯೋತಿ ಸಹಾಯಕಿ ಶ್ರೀಮತಿ ಶ್ವೇತಾ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಕು. ಅರ್ಪಿತಾ ಸ್ವಾಗತಿಸಿದರು. ಶಿಕ್ಷಕ ಸಹಶಿಕ್ಷಕ ಗಣರಾಜ್ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya
error: Content is protected !!