23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

ಬೆಳ್ತಂಗಡಿ; ತಂಬಾಕು ಮತ್ತು ಮಾದಕ ವ್ಯಸನಗಳ ಬಗ್ಗೆ ಅತೀ ಎಚ್ಚರದಿಂದ ಇರಬೇಕಾದವರು ವಿದ್ಯಾರ್ಥಿಗಳು. ಸ್ವತಃ ನಾವು ಎಲ್ಲಾ ವ್ಯಸನಗಳಿಂದ ದೂರ ಇರುವುದಲ್ಲದೆ ಸುತ್ತಮುತ್ತಲಿನ ಪರಿಸರ ಹಾಗೂ ಸಮಾಜವನ್ನು ವ್ಯಸನ ಮುಕ್ತಗೊಳಿಸುವ ಸಂಕಲ್ಪ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಮೂಲಕ ವ್ಯಸನ ಮುಕ್ತ ಯುವಜನತೆಯೇ ಸದೃಢ ಭಾರತದ ಕನಸು. ಆ ಕನಸು ಈಡೇರಿಕೆಯೇ ಜನಜಾಗೃತಿ ವೇದಿಕೆಯ ಸಂಕಲ್ಪ ಎಂದು ಹಿರಿಯ ಪತ್ರಕರ್ತ ಹಾಗೂ ಸ್ವಾಸ್ಥ್ಯ ಸಂಕಲ್ಪ ಸಂಪನ್ಮೂಲ ವ್ಯಕ್ತಿ ಅಚ್ಚು ಮುಂಡಾಜೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟು ಇಲ್ಲಿ ಜೂ.5 ರಂದು ನಡೆದ “ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಹಾಗೂ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ಉಪನ್ಯಾಸ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾಯೋಜನೆ, ಯುವ ರೆಡ್ ಕ್ರಾಸ್ ಸಹಯೋಗ ‌ನೀಡಿದರು.

ಕಾಲೇಜು ಪ್ರಚಾರ್ಯ ಪ್ರೊ. ಪದ್ಮನಾಭ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾಹಿತಿ ದೊರೆತಿದ್ದು ಮಾದರಿ ಕಾರ್ಯಕ್ರಮ ಎಂದು ಶ್ಲಾಘಿಸಿದರು.

ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಯಶವಂತ್, ಮೇಲಂತಬೆಟ್ಟು ಗ್ರಾ.ಪಂ ಮಾಜಿ ಸದಸ್ಯ ಚಂದ್ರರಾಜ್, ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ರಾಮ್ ಕುಮಾರ್, ಮೇಲಂತಬೆಟ್ಟು ವಿಭಾಗದ ಸೇವಾ ಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು.

ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ರೊನಾಲ್ಡ್ ಪ್ರವೀಣ್ ಕೊರೆಯ ಸ್ವಾಗತಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಸಂಚಾಲಕ ಡಾ. ರವಿ ಎಂ.ಎಂ ವಂದಿಸಿದರು.

ವಿದ್ಯಾರ್ಥಿಗಳಿಗೆ ದುಶ್ಚಟಮುಕ್ತ ಸಮಾಜ ನಿರ್ಮಾಣದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮಕ್ಕೂ‌ ಮುನ್ನ ಪರಿಸರ ದಿನಾಚರಣೆ ಪ್ರಯುಕ್ತ ಎನ್‌ಎಸ್‌ಎಸ್ ಮತ್ತು ಯುವ ರೆಡ್ ಕ್ರಾಸ್ ವತಿಯಿಂದ ಕಾಲೇಜು ಆವರಣದಲ್ಲಿ ಗಿಡ ನೆಡಲಾಯಿತು. ಸಂಪನ್ಮೂಲ ವ್ಯಕ್ತಿ ಅಚ್ಚು ಮುಂಡಾಜೆಯವರನ್ನು ಸನ್ಮಾನಿಸಲಾಯಿತು

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya
error: Content is protected !!