ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ  ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.  

ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ ಸವಣಾಲು ಹಾಗೂ ತೋಟಗಾರಿಕೆಯ ಹಿರಿಯ ಸಹಾಯಕ ನಿದೇರ್ಶಕ ಚಂದ್ರಶೇಖರ್, ಪುತ್ತೂರಿನ ಪ್ರಗತಿಪರ ಕಾಳುಮೆಣಸು ಬೆಳೆಗಾರ ರಾಷ್ಟ್ರಪ್ರಶಸ್ತಿ ವಿಜೇತ ಸುರೇಶ್ ಬಲ್ನಾಡ್ ಹಾಗೂ ಸೂರ್ಯ ಪ್ರಗತಿಪರ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಭಾಕರ ಮಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರಾಧಾ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ., ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ ಹಾಗೂ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿದೇರ್ಶಕಿ ಪ್ರೇಮಾ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್ ಸ್ವಾಗತಿಸಿ, ನಿರ್ದೇಶಕ ಮುನಿರಾಜ ಅಜ್ರಿ ವಂದಿಸಿ,  ಯತೀಶ್ ಗೌಡ ಕಂಗಿತ್ತಿಲು ನಿರೂಪಿಸಿದರು. ರೈತಾಪಿ ವರ್ಗದವರು ಭಾಗವಹಿಸಿದ್ದರು.

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!