ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ದಿನಾಚರಣೆಯನ್ನು ವಿಜ್ಞಾನ ಹಾಗೂ ಗಣಿತ ಸಂಘಗಳಿಂದ ನೆರವೇರಿಸಲಾಯಿತು.

ಮುಖ್ಯ ಅತಿಥಿಯಾಗಿ ಅರಣ್ಯ ಇಲಾಖೆಯಿಂದ ಉಪವಲಯ ಅರಣ್ಯ ಅಧಿಕಾರಿಯಾದ ರಾಘವೇಂದ್ರ ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ವಿದ್ಯಾರ್ಥಿಯು ಅಮ್ಮನ ಹೆಸರಿನಲ್ಲಿ ಒಂದು ಗಿಡವನ್ನು ನೆಡಬೇಕೆಂಬುದನ್ನು ತಿಳಿಸಿದರು. ಪ್ರಭಾರ ಮುಖ್ಯೋಪಾಧ್ಯಾಯಿನಿ ಜಸಿಂತ ಉಪಸ್ಥಿತರಿದ್ದರು.
ಶಿಕ್ಷಕ ಶಿಕ್ಷಕಿಯರಾದ ನಯನ, ಪ್ರಮೀಳಾ ಎನ್, ವಾಗ್ದೇವಿ, ಸದಾನಂದ, ಸಮತಾ ಇವರ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಿರೂಪಣೆಯನ್ನು ಆದ್ಯ ಜೈನ್ , ಸ್ವಾಗತವನ್ನು ಶ್ರೀವಿನಿತ್, ಧನ್ಯವಾದವನ್ನು ತ್ರಿಶಾಲಿ ನೆರವೇರಿಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.












