September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಜೂ.5 ರಂದು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು.ದೇವಾಲಯದ ಕೆಲಸದ ವೇಳೆ ಕಲ್ಲನ್ನು ತೆಗೆದುಕೊಂಡು ರಿವರ್ಸ್ ಹೋಗುವ ವೇಳೆ ಎಡವಿ ಬಿದ್ದು ಕ್ರೇನ್‌ಗೆ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಮೊಗ್ರು ಜೈ ಶ್ರೀ ರಾಮ್ ಮಹಿಳಾ ಸಂಘ ರಚನೆ, ಪದಾಧಿಕಾರಿಗಳ ನೇಮಕ

Suddi Udaya
error: Content is protected !!