23.7 C
ಪುತ್ತೂರು, ಬೆಳ್ತಂಗಡಿ
June 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮವು ಜೂ.5 ರಂದು ನಡೆಯಿತು.

ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ ವಹಿಸಿದರು.

ವೇದಿಕೆಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ರಾಮಯ್ಯ ಗೌಡ ಕೋಲಾರು, ಶಿರಾಡಿ ಗಡಿ ದೇವಸ್ಥಾನದ ಮಾಜಿ ಅಧ್ಯಕ್ಷ ನಾಗರಾಜ್, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಮಾಗಣೆಗುತ್ತು ಕೊಳೆಚ್ಚಾವು ಗುತ್ತುವಿನ ಹಿರಿಯರಾದ ದಾಮೋದರ ಗೌಡ ಕೊಳೆಚ್ಚಾವು, ದೇವಸ್ಥಾನದ ಕಾರ್ಯದರ್ಶಿ ಲಕ್ಷ್ಮಣ ಕನ್ನೆಕಂಡ , ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಬಾಲಕೃಷ್ಣ ಗೌಡ, ಐತಪ್ಪ ಕೋಲಾರು, ನಾರಾಯಣ ಗೌಡ ಗುಡ್ರಾದಿ , ತುಕರಾಮ ಗೌಡ ಗುಡ್ರಾದಿ , ಕುಶಾಲಪ್ಪ ಗೌಡ ಪಾಪಿನಮಂಡೆ, ಆನಂದ ಗೌಡ ಮುರತ್ತಮೇಲು, ರವಿಚಂದ್ರ ಗೌಡ ಕೋಲಾರು, ಸುಂದರ ಕೋಲಾರು ಉಪಸ್ಥಿತರಿದ್ದರು.

ಈ ವೇಳೆ ಶಾಸಕ ಹರೀಶ್ ಪೂಂಜರಿಗೆ ರೆಖ್ಯ ಗ್ರಾಮಸ್ಥರಿಂದ ಚಿನ್ನದ ಬ್ರಾಸ್ ಲೈಟ್ ಹಾಗೂ ಫಲಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.

ಭಜನಾ ಮಂಡಳಿ ವತಿಯಿಂದ ಕುಶಾಲಪ್ಪ ಗೌಡ ಪಾಪಿನಮಂಡೆಯವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ರಾಘವೇಂದ್ರ ನಾಯಕ್, ರಾಮಯ್ಯ ಗೌಡ, ಮಂಜುನಾಥ ಗೌಡ, ನಾಗರಾಜ್, ದಾಮೋದರ ಗೌಡರವರನ್ನು ಗೌರವಿಸಲಾಯಿತು.

ಹರಿಣಾಕ್ಷಿ ಕೋಲಾರು ಸ್ವಾಗತಿಸಿದರು. ನಾರಾಯಣ ಗೌಡ ಉರ್ನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶೋದರ ಕೋಟಿಮಾರು ಕಾರ್ಯಕ್ರಮ ನಿರೂಪಿಸಿದರು. ನವೀನ್ ಕೆ. ಧನ್ಯವಾದವಿತ್ತರು.

Related posts

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya
error: Content is protected !!