22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ರೆಖ್ಯ: ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮವು ಜೂ.5 ರಂದು ನಡೆಯಿತು.

ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ ವಹಿಸಿದರು.

ವೇದಿಕೆಯಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ರಾಮಯ್ಯ ಗೌಡ ಕೋಲಾರು, ಶಿರಾಡಿ ಗಡಿ ದೇವಸ್ಥಾನದ ಮಾಜಿ ಅಧ್ಯಕ್ಷ ನಾಗರಾಜ್, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಮಾಗಣೆಗುತ್ತು ಕೊಳೆಚ್ಚಾವು ಗುತ್ತುವಿನ ಹಿರಿಯರಾದ ದಾಮೋದರ ಗೌಡ ಕೊಳೆಚ್ಚಾವು, ದೇವಸ್ಥಾನದ ಕಾರ್ಯದರ್ಶಿ ಲಕ್ಷ್ಮಣ ಕನ್ನೆಕಂಡ , ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಬಾಲಕೃಷ್ಣ ಗೌಡ, ಐತಪ್ಪ ಕೋಲಾರು, ನಾರಾಯಣ ಗೌಡ ಗುಡ್ರಾದಿ , ತುಕರಾಮ ಗೌಡ ಗುಡ್ರಾದಿ , ಕುಶಾಲಪ್ಪ ಗೌಡ ಪಾಪಿನಮಂಡೆ, ಆನಂದ ಗೌಡ ಮುರತ್ತಮೇಲು, ರವಿಚಂದ್ರ ಗೌಡ ಕೋಲಾರು, ಸುಂದರ ಕೋಲಾರು ಉಪಸ್ಥಿತರಿದ್ದರು.

ಈ ವೇಳೆ ಶಾಸಕ ಹರೀಶ್ ಪೂಂಜರಿಗೆ ರೆಖ್ಯ ಗ್ರಾಮಸ್ಥರಿಂದ ಚಿನ್ನದ ಬ್ರಾಸ್ ಲೈಟ್ ಹಾಗೂ ಫಲಪುಷ್ಪವನ್ನು ನೀಡಿ ಸನ್ಮಾನಿಸಲಾಯಿತು.

ಭಜನಾ ಮಂಡಳಿ ವತಿಯಿಂದ ಕುಶಾಲಪ್ಪ ಗೌಡ ಪಾಪಿನಮಂಡೆಯವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ರಾಘವೇಂದ್ರ ನಾಯಕ್, ರಾಮಯ್ಯ ಗೌಡ, ಮಂಜುನಾಥ ಗೌಡ, ನಾಗರಾಜ್, ದಾಮೋದರ ಗೌಡರವರನ್ನು ಗೌರವಿಸಲಾಯಿತು.

ಹರಿಣಾಕ್ಷಿ ಕೋಲಾರು ಸ್ವಾಗತಿಸಿದರು. ನಾರಾಯಣ ಗೌಡ ಉರ್ನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶೋದರ ಕೋಟಿಮಾರು ಕಾರ್ಯಕ್ರಮ ನಿರೂಪಿಸಿದರು. ನವೀನ್ ಕೆ. ಧನ್ಯವಾದವಿತ್ತರು.

Related posts

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!