ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಸಹಕಾರಿ ನಡಿಗೆ ರೈತರಡೆಗೆ ಅಡಿಕೆ ಕಾಳುಮೆಣಸು ಹಾಗೂ ಸಮಗ್ರ ಕೃಷಿ ಮಾಹಿತಿ ಶಿಬಿರ ಜೂ. 6 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರಿ ಮಂಜುನಾಥ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಅರಿಗ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದಾಟಿಸಿದರು. ಮುಖ್ಯ ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಗಣೇಶ್ ಭಂಡಾರಿ ಸವಣಾಲು ಹಾಗೂ ತೋಟಗಾರಿಕೆಯ ಹಿರಿಯ ಸಹಾಯಕ ನಿದೇರ್ಶಕ ಚಂದ್ರಶೇಖರ್, ಪುತ್ತೂರಿನ ಪ್ರಗತಿಪರ ಕಾಳುಮೆಣಸು ಬೆಳೆಗಾರ ರಾಷ್ಟ್ರಪ್ರಶಸ್ತಿ ವಿಜೇತ ಸುರೇಶ್ ಬಲ್ನಾಡ್ ಹಾಗೂ ಸೂರ್ಯ ಪ್ರಗತಿಪರ ಕೃಷಿಕ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಭಾಕರ ಮಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ರಾಧಾ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ., ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ್ಯ ನಾಯ್ಕ, ರಮೇಶ್ ನಲ್ಕೆ ಹಾಗೂ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿದೇರ್ಶಕಿ ಪ್ರೇಮಾ ಪ್ರಾರ್ಥಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್ ಸ್ವಾಗತಿಸಿ, ನಿರ್ದೇಶಕ ಮುನಿರಾಜ ಅಜ್ರಿ ವಂದಿಸಿ, ಯತೀಶ್ ಗೌಡ ಕಂಗಿತ್ತಿಲು ನಿರೂಪಿಸಿದರು. ರೈತಾಪಿ ವರ್ಗದವರು ಭಾಗವಹಿಸಿದ್ದರು.












