ಬೆಳ್ತಂಗಡಿ: ನಾಡಿನ ಶ್ರೇಷ್ಠ ಸ್ವರ್ಣೋಧ್ಯಮ ಮಳಿಗೆಯಲ್ಲಿ ಮುಳಿಯ ಗ್ರಾಹಕರಿಗೆ ಪ್ರಾಮಾಣಿಕ ಸೇವೆ ನೀಡುವ ಮೂಲಕ ಮನೆಮಾತಾದ ಸಂಸ್ಥೆಯಾಗಿದೆ.

ಪ್ರತಿ ವರ್ಷವೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಗೌರವಿಸುತ್ತಿದ್ದು ಈ ಬಾರಿಯು ಶೈಕ್ಷಣಿಕ ಸಾಧಕರನ್ನು ಗೌರವಿಸಿದೆ.

ಈ ಸಂದರ್ಭದಲ್ಲಿ ಮುಳಿಯ ಸಂಸ ಸಂಸ್ಥೆಯ ಮುಖ್ಯಸ್ಥರಾದ ಕೃಷ್ಣ ನಾರಾಯಣ ಮುಳಿಯ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಕಾಮಿಡಿ ಕಿಲಾಡಿ ಖ್ಯಾತಿಯ ನಟ ಅನೀಶ್ ಅಮೀನ್, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.












