September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಜೂ.5 ರಂದು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು.ದೇವಾಲಯದ ಕೆಲಸದ ವೇಳೆ ಕಲ್ಲನ್ನು ತೆಗೆದುಕೊಂಡು ರಿವರ್ಸ್ ಹೋಗುವ ವೇಳೆ ಎಡವಿ ಬಿದ್ದು ಕ್ರೇನ್‌ಗೆ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಮೀಲಾದ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!