July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಇನ್ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(ಎಐ) ಮತ್ತು ಜಿಪಿಎಸ್ ಆಧಾರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜೂ.4ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಮುಖ್ಯಮಂತ್ರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ ‘ಕರ್ತವ್ಯ ಆ್ಯಪ್’ ನಲ್ಲಿಈಗಾಗಲೇ ಹೆಚ್‌ ಆರ್ ಎಂ. ಎಸ್ ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನು ನೋಂದಾಯಿಸಲಾಗಿದೆ.

ಆದ್ರೆ ಬಹಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶ(ಆ್ಯಪ್)ವನ್ನು ನಿರಂತರವಾಗಿ ಬಳಸದೇ ಇರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya
error: Content is protected !!