22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

ಮೂಡುಬಿದಿರೆ: ಜೂನ್ 6 ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಬಿಎಸ್ಸಿ ಕೃಷಿ, ನರ್ಸಿಂಗ್ ಪ್ರವೇಶಕ್ಕೆ ನೂರರ ಒಳಗಿನ ರಾಂಕ್ ಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಕಾಲೇಜಿನ ತನ್ಮಯಿ ಕೋಟಿ (18 ನೇ), ತನುಶ್ರೀ ಎಚ್ ಆರ್ ( 23 ನೇ), ಧ್ರುವಂತ್ ಕೆ (41ನೇ), ನಿಖಿಲ್ ಎಸ್ ಎಸ್ ( 41 ನೇ), ನಿಶ್ಚಲ್ ( 58 ನೇ ) ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪುಷ್ಪರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ದೇಶಕ ಡಾ. ಪ್ರಶಾಂತ್ ಹೆಗಡೆ, ಸಿಇಟಿ ಸಮನ್ವಯಕಾರ ರಂಜಿತ್ ಜೈನ್, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ. ನಿರಂತರ ಶೈಕ್ಷಣಿಕ ಮಾರ್ಗದರ್ಶನ, ಪರೀಕ್ಷಾ ಪೂರ್ವ ತರಬೇತಿ, ವಿಶೇಷ ಅಭ್ಯಾಸ ತರಗತಿಗಳು, ಈ ಯಶಸ್ಸಿಗೆ ಕಾರಣವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!