September 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

ಮೂಡುಬಿದಿರೆ: ಜೂನ್ 6 ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ಫಲಿತಾಂಶದಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ದಾಖಲಿಸಿದ್ದು ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಬಿಎಸ್ಸಿ ಕೃಷಿ, ನರ್ಸಿಂಗ್ ಪ್ರವೇಶಕ್ಕೆ ನೂರರ ಒಳಗಿನ ರಾಂಕ್ ಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಕಾಲೇಜಿನ ತನ್ಮಯಿ ಕೋಟಿ (18 ನೇ), ತನುಶ್ರೀ ಎಚ್ ಆರ್ ( 23 ನೇ), ಧ್ರುವಂತ್ ಕೆ (41ನೇ), ನಿಖಿಲ್ ಎಸ್ ಎಸ್ ( 41 ನೇ), ನಿಶ್ಚಲ್ ( 58 ನೇ ) ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ ಐವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ಪುಷ್ಪರಾಜ್, ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ದೇಶಕ ಡಾ. ಪ್ರಶಾಂತ್ ಹೆಗಡೆ, ಸಿಇಟಿ ಸಮನ್ವಯಕಾರ ರಂಜಿತ್ ಜೈನ್, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ. ನಿರಂತರ ಶೈಕ್ಷಣಿಕ ಮಾರ್ಗದರ್ಶನ, ಪರೀಕ್ಷಾ ಪೂರ್ವ ತರಬೇತಿ, ವಿಶೇಷ ಅಭ್ಯಾಸ ತರಗತಿಗಳು, ಈ ಯಶಸ್ಸಿಗೆ ಕಾರಣವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

Related posts

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya
error: Content is protected !!